Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-12

ಪ್ಯಾಂಟಿನೊಳಗೆ ಸಿಕ್ಕಿದ್ದ ನಾಗರ ಹಾವು: ಉರಗತಜ್ಞ ರಕ್ಷಣೆಯಿಂದ ಪ್ರಾಣಾಪಾಯದಿಂದ ತಪ್ಪಿದ ಮಾಂತೇಶ

News Details

ಶಿರಸಿಯ ಮಾಂತೇಶ ಅವರ ಪ್ಯಾಂಟಿನ ಒಳಗೆ ನಾಗರ ಹಾವು ಸಿಕ್ಕಿಬಿದ್ದಿದ್ದು, ಉರಗತಜ್ಞ ಪ್ರಶಾಂತ ಹುಲೆಕಲ್ ಹಾವನ್ನು ರಕ್ಷಿಸಿ ಮಾಂತೇಶ ಅವರ ಪ್ರಾಣವನ್ನು ಉಳಿಸಿದ್ದಾರೆ.

ಶಿರಸಿ ನಾರಾಯಣಗುರು ನಗರದ ಮಾಂತೇಶ ಅವರು ಶುಕ್ರವಾರ ಸಂಜೆ ಪೇಟೆಗೆ ಹೋಗುವವರಿದ್ದರು. ಅಂಗಿ ಧರಿಸಿದ ಅವರು ಪ್ಯಾಂಟಿಗಾಗಿ ಕೈ ಹಾಕಿದರು. ಆಗ, ಅದರೊಳಗಿದ್ದ ನಾಗರ ಬುಸ್ ಎಂದಿದ್ದು, ಮಾಂತೇಶ್ ಅವರು ಬೆಚ್ಚಿ ಬಿದ್ದರು.

ತಕ್ಷಣ ಆ ಪ್ಯಾಂಟನ್ನು ನೆಲದ ಮೇಲೆ ಎಸೆದು ದೂರ ಸರಿದರು. ಕಂಗಾಲಾದ ಮಾಂತೇಶ ಅವರು ಜೋರಾಗಿ ಬೊಬ್ಬೆ ಹೊಡೆದರು. ಅದನ್ನು ಕೇಳಿ ಅಕ್ಕ-ಪಕ್ಕದವರು ಸಹ ಆಗಮಿಸಿದರು. ಬಳಿಕ ಉರಗತಜ್ಞ ಪ್ರಶಾಂತ ಹುಲೆಕಲ್ ಅವರನ್ನು ಜನ ಸ್ಥಳಕ್ಕೆ ಕರೆಯಿಸಿದರು.

ಪ್ಯಾಂಟಿನ ಒಳಗೆ ಸಿಲುಕಿಕೊಂಡಿದ್ದ ಹಾವನ್ನು ಪ್ರಶಾಂತ ಹುಲೆಕಲ್ ಹೊರತೆಗೆದರು. ನಂತರ ಅದನ್ನು ಕಾಡಿಗೆ ಬಿಟ್ಟರು. ಮಾಂತೇಶ ಕುಟುಂಬದವರು ಸಹ ಇದರಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.