Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-14

ಮೈಸೂರಿನಿಂದ ಬಂದ ಪ್ರವಾಸಿ ಬಸ್ಸು ಹೊನ್ನಾವರ ಗೇರುಸೊಪ್ಪದ ಬಳಿ ಪಲ್ಟಿ

News Details

ಮೈಸೂರಿನಿಂದ ಮುರುಡೇಶ್ವರ ಪ್ರವಾಸಕ್ಕೆ ಬಂದಿದ್ದ ಬಸ್ಸು ಹೊನ್ನಾವರದ ಗೇರುಸೊಪ್ಪದ ಬಳಿ ಪಲ್ಟಿಯಾಗಿದೆ.

ಶನಿವಾರ ರಾತ್ರಿ ನಡೆದ ಈ ಅಪಘಾತದಲ್ಲಿ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಸುಳೆಮುರ್ಖಿ ತಿರುವಿನಲ್ಲಿ ಬಸ್ಸು ಹೆದ್ದಾರಿ ಪಕ್ಕ ಉರುಳಿ ಬಿದ್ದಿದೆ. 51 ಪ್ರವಾಸಿಗರು ಈ ಬಸ್ಸಿನಲ್ಲಿದ್ದರು. ಗಾಯಗೊಂಡವರನ್ನು ಹೊನ್ನಾವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಗಾಯಗೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಂಭೀರ ಗಾಯಗೊಂಡವರನ್ನು ಬೇರೆ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಈ ಬಸ್ಸಿನಲ್ಲಿದ್ದವರು ಮೈಸೂರು ಪ್ರವಾಸಕ್ಕೆ ಹೋಗಿದ್ದರು. ಎಲ್ಲರೂ ಮಹಾರಾಷ್ಟ್ರ ಮೂಲದವರಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.