Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-15

ಭಗತ್ ಸಿಂಗ್ ಸರ್ಕಲ್ ಅಪಘಾತ: ಬಾಲರಾಜ ನಾಡರ್ ಚಿಕಿತ್ಸೆ ಫಲಕಾರಿಯಾಗದೆ ಸಾವು

News Details

ಸಿದ್ದಾಪುರದ ಭಗತ್ ಸಿಂಗ್ ಸರ್ಕಲಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲರಾಜ ನಾಡರ್ ಅವರನ್ನು ಮೂರು ಆಸ್ಪತ್ರೆಗಳಿಗೆ ತೋರಿಸಿದರೂ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಭಾನುವಾರ ಬೆಳಗ್ಗೆ ಅವರು ಸಾವನಪ್ಪಿದ್ದಾರೆ.

ಸಿದ್ದಾಪುರ ರವೀಂದ್ರ ನಗರದ ಬಾಲರಾಜ ನಾಡರ್ (40) ಅವರು ಮಾರ್ಚ 29ರ ರಾತ್ರಿ ಅಪಘಾತಕ್ಕೀಡಾಗಿದ್ದರು. ಸಿದ್ದಾಪುರದ ಭಗತ್ ಸಿಂಗ್ ಸರ್ಕಲಿನಲ್ಲಿ ಅವರು ಕಾರಿಗೆ ತಮ್ಮ ಬೈಕ್ ಗುದ್ದಿದ್ದರು. ಗಾಯಗೊಂಡ ಬಾಲರಾಜ ನಾಡರ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅದಾದ ನಂತರ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಏಪ್ರಿಲ್ 12ರಂದು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಅವರನ್ನು ಕರೆತರಲಾಯಿತು. ಏಪ್ರಿಲ್ 14ರಂದು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದರು. ಈ ಬಗ್ಗೆ ಬಾಲರಾಜ ನಾಡರ್ ಅವರ ಪತ್ನಿ ಚೇತನ ನಾಡರ್ ಮಾಹಿತಿ ನೀಡಿದರು.