
0:00:00
2025-04-15
ಭಗತ್ ಸಿಂಗ್ ಸರ್ಕಲ್ ಅಪಘಾತ: ಬಾಲರಾಜ ನಾಡರ್ ಚಿಕಿತ್ಸೆ ಫಲಕಾರಿಯಾಗದೆ ಸಾವು
News Details
ಸಿದ್ದಾಪುರದ ಭಗತ್ ಸಿಂಗ್ ಸರ್ಕಲಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬಾಲರಾಜ ನಾಡರ್ ಅವರನ್ನು ಮೂರು ಆಸ್ಪತ್ರೆಗಳಿಗೆ ತೋರಿಸಿದರೂ ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಭಾನುವಾರ ಬೆಳಗ್ಗೆ ಅವರು ಸಾವನಪ್ಪಿದ್ದಾರೆ.
ಸಿದ್ದಾಪುರ ರವೀಂದ್ರ ನಗರದ ಬಾಲರಾಜ ನಾಡರ್ (40) ಅವರು ಮಾರ್ಚ 29ರ ರಾತ್ರಿ ಅಪಘಾತಕ್ಕೀಡಾಗಿದ್ದರು. ಸಿದ್ದಾಪುರದ ಭಗತ್ ಸಿಂಗ್ ಸರ್ಕಲಿನಲ್ಲಿ ಅವರು ಕಾರಿಗೆ ತಮ್ಮ ಬೈಕ್ ಗುದ್ದಿದ್ದರು. ಗಾಯಗೊಂಡ ಬಾಲರಾಜ ನಾಡರ್ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅದಾದ ನಂತರ ಮಂಗಳೂರಿನ ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಏಪ್ರಿಲ್ 12ರಂದು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ಅವರನ್ನು ಕರೆತರಲಾಯಿತು. ಏಪ್ರಿಲ್ 14ರಂದು ಅವರು ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದರು. ಈ ಬಗ್ಗೆ ಬಾಲರಾಜ ನಾಡರ್ ಅವರ ಪತ್ನಿ ಚೇತನ ನಾಡರ್ ಮಾಹಿತಿ ನೀಡಿದರು.