
23:25:00
2025-03-14
ಶಿರಸಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.17ರಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ
News Details
ಶಿರಸಿ: ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾ.17ರಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಕಾವ್ಯಾನಂದ ನಾಯ್ಕ ಮತ್ತು ಜಿಲ್ಲಾ ಯುವ ಉಪಾಧ್ಯಕ್ಷ ಹರೀಶ ನಾಯ್ಕ್ ಹಸ್ವಿಗುಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಮಾ.17ರಂದು ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಅತೀ ಹೆಚ್ಚು ಯುವಕರು ಪಾಲ್ಗೋಳ್ಳಬೇಕು. ಬೆಂಗಳೂರಿಗೆ ಬರುವ ಕಾರ್ಯಕರ್ತರಿಗೆ ವಾಹನದ ವ್ಯವಸ್ಥೆ ಮಾಡಲಾಗಿದೆ ಎಂದ ಅವರು .ಕೇಂದ್ರದ ನಾಯಕರು ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ ಎಂದರು ಈ ಸಂದರ್ಭದಲ್ಲಿ ರಾಜ್ಯಕಾರ್ಯದರ್ಶಿ ಪವನ್ ನಾಯ್ಕ, ಸಂತೋಷ ನಾಯ್ಕ, ಅಪೂರ್ವ ನಾಯ್ಕ, ಪ್ರಶಾಂತ ನಾಯ್ಕ ಸೇರಿದಂತೆ ಹಲವರು ಇದ್ದರು.