Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-18

ಪಾತಿ ದೋಣಿಯಿಂದ ನೀರಿಗೆ ಬಿದ್ದು ಗಣಪತಿ ಮೊಗೇರ್ ದುರ್ಮರಣ

News Details

ಪಾತಿ ದೋಣಿ ಮೂಲಕ ಅರಬ್ಬಿ ಸಮುದ್ರಕ್ಕೆ ಹೋದ ಗಣಪತಿ ಮೊಗೇರ್ (47) ದೋಣಿಯಿಂದ ನೀರಿಗೆ ಬಿದ್ದು ಸಾವನಪ್ಪಿದ್ದಾರೆ.

ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕಾಯ್ಕಿಣಿ ಮಠದ ಹಿತ್ಲು ಸಮೀಪದ ತಂಡ್ಲಮನೆಯಲ್ಲಿ ಗಣಪತಿ ಮೊಗೇರ್ ವಾಸವಾಗಿದ್ದರು. ಏಪ್ರಿಲ್ 16ರ ಸಂಜೆ ಅವರು ದೋಣಿ ಮೂಲಕ ಮೀನು ಹಿಡಿಯಲು ಸಮುದ್ರಕ್ಕೆ ಹೋಗಿದ್ದರು. ದೊಡ್ಡ ಅಲೆಯೊಂದು ದೋಣಿಗೆ ಅಪ್ಪಳಿಸಿದ್ದರಿಂದ ಗಣಪತಿ ಮೊಗೇರ್ ಆಯತಪ್ಪಿ ನೀರಿಗೆ ಬಿದ್ದರು. ಮತ್ತೆ ಮೇಲೆಳಲು ಅವರಿಗೆ ಸಾಧ್ಯವಾಗಲಿಲ್ಲ. ಅವರ ಸಹೋದರ ನಾಗೇಶ ತಂಡ್ಲಮನೆ ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.