Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-19

ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಶೃಂಗೇರಿ ಸ್ವಾಮೀಜಿಗಳ ಬೆಂಬಲ

News Details

ಹೊನ್ನಾವರದ ಕಾಸರಕೋಡಿನಲ್ಲಿ ವಾಣಿಜ್ಯ ಬಂದರು ವಿರೋಧಿ ಹೋರಾಟಕ್ಕೆ ಶೃಂಗೇರಿ ಪೀಠದ ವಿಧುಶೇಖರ ಭಾರತಿ ಸ್ವಾಮೀಜಿ ಬೆಂಬಲ ನೀಡಿದ್ದಾರೆ. ಮೀನುಗಾರರ ಮನವಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅವರು `ಹೋರಾಟಗಾರರ ಜೊತೆ ತಾನಿದ್ದೇನೆ' ಎಂಬ ಸಂದೇಶ ರವಾನಿಸಿದರು.

ಹೊನ್ನಾವರ ಪಟ್ಟಣದ ಬಜಾರ್ ರಸ್ತೆಯಲ್ಲಿ ಶ್ರೀ ಶಾರದಾಂಬ ದೇವಸ್ಥಾನದ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಶ್ರೀಗಳು ಆಗಮಿಸಿದ್ದರು. ಟೊಂಕಾದ ಮೀನುಗಾರರು ಗುರುಗಳನ್ನು ಭೇಟಿಯಾಗಿ ತಮ್ಮ ಸಮಸ್ಯೆ ವಿವರಿಸಿದರು. ವಾಣಿಜ್ಯ ಬಂದರು ಯೋಜನೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಮೀನುಗಾರರು ಮನವರಿಕೆ ಮಾಡಿದರು.

ಮೀನುಗಾರರ ಕುಟುಂಬದ ಮೇಲೆ ಆಗುತ್ತಿರುವ ದೌರ್ಜನ್ಯದ ಬಗ್ಗೆ ವಿವರಿಸಿದರು. `ನಮ್ಮ ಬದುಕು ಕಾಪಾಡಿ' ಎಂದು ಅಂಗಲಾಚಿದರು. ಮೀನುಗಾರರ ಅಳಲು ಆಲಿಸಿದ ಸ್ವಾಮೀಜಿ ಕಾರ್ಯಕ್ರಮ ಮುಗಿಸಿ ನೇರವಾಗಿ ಯೋಜನೆಯ ಸ್ಥಳಕ್ಕೆ ತೆರಳಿದರು. ಅಲ್ಲಿನ ಸಮಸ್ಯೆಗಳ ಬಗ್ಗೆ ಅರಿತು ಮೀನುಗಾರರಿಗೆ ಅಭಯ ನೀಡಿದರು.

`ಇಲ್ಲಿನ ಮೀನುಗಾರರ ಕುಟುಂಬಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತೇನೆ' ಎಂದು ಸ್ವಾಮೀಜಿ ಭರವಸೆ ನೀಡಿದರು.