
0:00:00
2025-04-20
ಶಾಸಕಭೀಮಣ್ಣ ನಾಯ್ಕರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲನ್ಯಾಸ
News Details
ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಶನಿವಾರ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿದರು.
ತಾಲೂಕಿನ ಬೇಡ್ಕಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಡ್ಕಣಿ ಊರಿನ ದೊಡ್ಡಬೈಲು ಹಕ್ಕಲಿನಿಂದ ಕುದ್ರಗುಂಡಿ ತೋಟದ ರಸ್ತೆ ನಿರ್ಮಾಣ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಸೂಚಿಸಿದರು. ನಂತರ ಇಟಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವರ್ತೆಕೊಡ್ಲು ಜಟಗಿನಮನೆ ಕಲಾವನ ಹೊಳೆಗೆ ಸೇತುವೆ ಸಹಿತ ಕಿಂಡಿ ಆಣೆಕಟ್ಟು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಚಾರಕ್ಕೆ ಯೋಗ್ಯವಾಗುವಂತೆ ಸೇತುವೆ ಹಾಗೂ ಕಿಂಡಿ ಆಣೆಕಟ್ಟು ನಿರ್ಮಿಸುವಂತೆ ಸೂಚಿಸಿದರು.
ಈ ವೇಳೆ ಸ್ಥಳೀಯ ಗ್ರಾಪಂ ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹಾಜರಿದ್ದರು.