Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-21

ಶಿರಾಳಕೊಪ್ಪದಿಂದ ಶಿರಸಿಗೆ ಬಂದಿದ್ದ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಆ ಲಾರಿ ಸುಟ್ಟು ಕರಕಲಾಗಿದೆ

News Details

ಶಿರಾಳಕೊಪ್ಪದಿಂದ ಶಿರಸಿಗೆ ಬಂದಿದ್ದ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಆ ಲಾರಿ ಸುಟ್ಟು ಕರಕಲಾಗಿದೆ.

ಭಾನುವಾರ ಬೆಳಗ್ಗೆ ಹುಲ್ಲು ತುಂಬಿದ ಲಾರಿ ಬದನಗೋಡು ಗ್ರಾ ಪಂ ವ್ಯಾಪ್ತಿಯ ರಂಗಾಪುರ ಮಾರ್ಗವಾಗಿ ಚಲಿಸುತ್ತಿತ್ತು. ರಂಗಾಪುರ ಪ್ರವೇಶಿಸಿದಾಗ ಲಾರಿಗೆ ಬೆಂಕಿ ತಗುಲಿತು. ಪರಿಣಾಮ ಹುಲ್ಲು ಪೂರ್ತಿಯಾಗಿ ಸುಟ್ಟಿತು. ಅಗ್ನಿಯ ಜ್ವಾಲೆ ಇಡೀ ವಾಹನವನ್ನು ಆವರಿಸಿತು.

ಈ ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರು. ಅಷ್ಟರೊಳಗೆ ಹುಲ್ಲಿನ ಜೊತೆ ಲಾರಿ ಸುಟ್ಟು ಕಪ್ಪಾಗಿತ್ತು. ಹರಸಾಹಸದಿಂದ ಬೆಂಕಿ ಇನ್ನಷ್ಟು ಹೊತ್ತಿ ಉರಿಯುವುದನ್ನು ತಪ್ಪಿಸಿದರು. ಬೆಂಕಿಯ ಜ್ವಾಲೆಯಿಂದ ಆಗಬಹುದಾದ ಇನ್ನಷ್ಟು ಅಪಾಯವನ್ನು ತಪ್ಪಿಸಿದರು.

ಶಿರಸಿ ಅಗ್ನಿಶಾಮಕ ದಳದ ಸಹಾಯಕ ಅಧಿಕಾರಿ ಕೆಂಪಣ್ಣ ಮಧುಗಿರಿ ಬೆಂಕಿ ಆರಿಸುವ ಕಾರ್ಯಾಚರಣೆಯಲ್ಲಿ ಶ್ರಮಿಸಿದರು. ಅಗ್ನಿ ಅವಘಡಕ್ಕೆ ಕಾರಣ ಗೊತ್ತಾಗಲಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.