Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-21

ಗೋಕರ್ಣದಲ್ಲಿ ರಸ್ತೆ ಕಬಳಿಕೆ ತಡೆಗೆ ಪೊಲೀಸರ ಕಾರ್ಯಾಚರಣೆ

News Details

ಗೋಕರ್ಣದ ಹಲವು ಕಡೆ ರಸ್ತೆ ಬದಿಯ ಅಂಗಡಿಗಳು ರಸ್ತೆಯನ್ನು ಕಬಳಿಸಿವೆ. ಭಾನುವಾರ ಅಲ್ಲಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ರಸ್ತೆ ಬದಿ ಅಂಗಡಿಕಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಸಿಪಿಐ ಶ್ರೀಧರ ಹಾಗೂ ಪಿಎಸ್‌ಐ ಖಾದರ್ ಭಾಷಾ ಅವರು ಈ ದಿನ ಓಂ ಬೀಚ್ ಕಡೆ ತೆರಳಿದರು. ಅಲ್ಲಿ ರಸ್ತೆಯ ಮೇಲಿದ್ದ ಅಂಗಡಿಕಾರರಿಗೆ ಬಿಸಿ ಮುಟ್ಟಿಸಿದರು. ಪ್ರವಾಸಿಗರ ಓಡಾಟಕ್ಕೆ ಅಸಾಧ್ಯವಾಗುವ ರೀತಿ ಅಂಗಡಿಕಾರರು ರಸ್ತೆಯ ಮೇಲೆ ಬಂದಿದ್ದು, ಅದನ್ನು ತೆರವು ಮಾಡಿದರು. ಮತ್ತೆ ಇದೇ ರೀತಿ ರಸ್ತೆ ಅತಿಕ್ರಮಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.

ಓಂ ಕಡಲತೀರಕ್ಕೆ ತೆರಳುವ ಮೆಟ್ಟುಲುಗಳ ಮೇಲೆ ಅಂಗಡಿ ಮುಂಗಟ್ಟುಗಳಿದ್ದು, ಅದನ್ನು ಪೊಲೀಸರು ತೆರವು ಮಾಡಿಸಿದರು. ಕೆಲವರು ಮಳಿಗೆ ತೆರವಿಗೆ ಒಂದು ದಿನದ ಸಮಯ ಕೇಳಿದರು. ಇದಕ್ಕೆ ಒಪ್ಪಿ ಪೊಲೀಸರು ಸಮಯಾವಕಾಶ ನೀಡಿದರು.

`ಗೋಕರ್ಣದ ರಥಬೀದಿ ಸೇರಿ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ಸಹ ಅಂಗಡಿಕಾರರು ರಸ್ತೆಗೆ ಬಂದಿದ್ದಾರೆ. ಇಕ್ಕಟ್ಟಾದ ರಸ್ತೆ ಅತಿಕ್ರಮಣವಾಗಿದ್ದರಿಂದ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಹೀಗಾಗಿ ಮುಖ್ಯ ಕಡಲತೀರಕ್ಕೆ ಹೋಗುವ ಕಡೆಯಲ್ಲಿಯೂ ಅತಿಕ್ರಮಣ ತೆರವು ನಡೆಯಬೇಕು' ಎಂದು ಜನ ಆಗ್ರಹಿಸಿದರು.