Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-21

ಶಿರಸಿಯಲ್ಲಿ ಗಾಂಜಾ ಸೇವನೆ: ಪೊಲೀಸರಿಂದ ಕಠಿಣ ಕ್ರಮ

News Details

ಬೀಡಿ-ಸಿಗರೇಟಿನ ಅಮಲು ಸಾಕಾಗದೇ ಶಿರಸಿಯ ವಿರಾಲ್ ಶೆಟ್ಟಿ ಗಾಂಜಾ ಮೊರೆ ಹೋಗಿದ್ದು, ಕಠಿಣ ಕ್ರಮ ಜರುಗಿಸುವ ಮೂಲಕ ಪೊಲೀಸರು ಅವರ ನಶೆ ಇಳಿಸಿದ್ದಾರೆ.

ಶಿರಸಿಯ ನಾರಾಯಣಗುರು ವಿರಾಲ್ ಈಶ್ವರ ಶೆಟ್ಟಿ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಪೊಲೀಸರನ್ನು ಕಂಡ ತಕ್ಷಣ ಅವರು ಇನ್ನಷ್ಟು ಭಯಗೊಂಡರು. ಅಮಲಿನಲ್ಲಿದ್ದ ಅವರನ್ನು ಪೊಲೀಸರು ವಶಕ್ಕೆಪಡೆದು ವೈದ್ಯಕೀಯ ಪರೀಕ್ಷೆಗೆ ರವಾನಿಸಿದರು. ಆಗ, ವಿರಾಲ್ ಶೆಟ್ಟಿ ಗಾಂಜಾ ಸೇವಿಸಿರುವುದು ದೃಢವಾಯಿತು.

ಈ ಹಿನ್ನಲೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು. ಗಾಂಜಾ ಸೇವನೆಯ ಅಪಾಯಕಾರಿ ಅಂಶಗಳ ಬಗ್ಗೆ ಮನವರಿಕೆಯನ್ನು ಮಾಡಿದರು. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆ ಪಿಎಸ್‌ಐ ರಾಜಕುಮಾರ ಉಕ್ಕಲಿ, ಸಿಬ್ಬಂದಿ ಮಾಂತೇಶ ಬಾರ್ಕೆರ್, ಪ್ರಸಾದ ಮಡಿವಾಳ, ಮಲ್ಲಿಕಾರ್ಜುನ ಕೊಂಡೊಜಿ, ಮಂಜುನಾಥ ವಾಲಿ, ಹನುಮಂತ ವಾಲಿಕರ್ ಈ ಕಾರ್ಯಾಚರಣೆಯಲ್ಲಿದ್ದರು.