Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-23

ಹೊನ್ನಾವರ ಉಪ್ಪೋಣಿಯಲ್ಲಿ ಬಸ್-ಸ್ಕಾರ್ಪಿಯೋ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

News Details

ಹೊನ್ನಾವರದ ಉಪ್ಪೋಣಿಯ ಬಳಿ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಸ್ಕಾರ್ಪಿಯೋ ಕಾರಿನ ನಡುವೆ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ ಭಟ್ಕಳದಿಂದ ಶಿರಸಿ ಮಾರ್ಗವಾಗಿ ಈ ಬಸ್ಸು ಸಂಚರಿಸುತ್ತಿತ್ತು. ಸ್ಕಾರ್ಪಿಯೋ ಸಾಗರದಿಂದ ಮುರುಡೇಶ್ವರ ಕಡೆ ತೆರಳುತ್ತಿತ್ತು. ಎರಡು ವಾಹನ ವೇಗವಾಗಿ ಸಂಚರಿಸುತ್ತಿದ್ದರಿoದ ಭೀಕರ ಅಪಘಾತ ನಡೆಯಿತು. ಅಪಘಾತದಲ್ಲಿ ಕಾರಿನ ಮುಂದಿನ ಭಾಗ ನುಚ್ಚು ನೂರಾಯಿತು.

ಮುರುಡೇಶ್ವರದಲ್ಲಿ ಬುಧವಾರ ನಡೆಯಬೇಕಿದ್ದ ನಿಶ್ಚಿತಾರ್ಥದಲ್ಲಿ ಭಾಗವಹಿಸಲು ಬೆಂಗಳೂರಿನಿoದ ಐವರು ಹೊರಟಿದ್ದರು. ಆದರೆ, ಹೊನ್ನಾವರದ ಉಪ್ಪೋಣಿ ಬಳಿ ಕಾರಿಗೆ ಬಸ್ಸು ಗುದ್ದಿತು. ಅಪಘಾತದ ರಭಸಕ್ಕೆ ಬೆಂಗಳೂರಿನ ರಕ್ಷಿತ್ ಹಾಗೂ ಶ್ರೀನಿವಾಸ ಎಂಬಾತರು ಅಲ್ಲಿಯೇ ಕೊನೆ ಉಸಿರೆಳೆದರು.

ಉಳಿದ ಮೂವರು ಗಾಯಗೊಂಡಿದ್ದು, ಅವರೆಲ್ಲರೂ ಉಡುಪಿ ಆಸ್ಪತ್ರೆಗೆ ದಾಖಲಾದರು. ಬಸ್ಸಿನಲ್ಲಿದ್ದವರಿಗೂ ಕೆಲವರಿಗೆ ಗಾಯಗಳಾಗಿವೆ. ಹೊನ್ನಾವರ ಪೊಲೀಸರು ಸ್ಥಳ ಭೇಟಿ ನಡೆಸಿದ್ದಾರೆ.