Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-28

ನಕಲಿ ಖಾತೆ ಹಂಚಿಕೆ: ದಾಂಡಿಗನಿಗೆ ಬಂಧನ, ಜೈಲು ಶಿಕ್ಷೆ

News Details

ನಕಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಅಸಂಬದ್ಧ ಫೋಟೋ-ಮಾಹಿತಿ ಹಂಚಿಕೊಳ್ಳುತ್ತಿದ್ದ ದಾಂಡೇಲಿಯ ದಾಂಡಿಗನಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸರು ಅಲ್ಲಿಯೂ ಕಾನೂನು ಪಾಠ ಮಾಡಿದ್ದಾರೆ.

ದಾಂಡೇಲಿಯ ಆಜಾದ್ ನಗರದಮಹಮ್ಮದ ಅನೀಸ್ ಅಬ್ದುಲ್ ಕರೀಂ ಹುಲುಗೂರು(46) ಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ಜೊತೆಗೆ ಫೇಸ್ಬುಕ್'ನಲ್ಲಿ ನಕಲಿ ಖಾತೆ ತೆರೆದು ಜನರನ್ನು ಕಾಡಿಸುತ್ತಿದ್ದರು. ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ನಂತರ ಸಮಾಜದ ದಾರಿ ತಪ್ಪಿಸಲು ಅವರು ಪ್ರಯತ್ನಿಸಿದ್ದರು. ಕಾದೀರ್ ಖಾನ್ ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ರಚಿಸಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇನ್ನಿತರ ನಾಯಕರನ್ನು ನಾಯಿಗೆ ಹೋಲಿಸಿ ಫೋಟೋ ಹಂಚಿಕೊAಡಿದ್ದರು.

ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೊಗಿ ಆದಿತ್ಯನಾಥ, ಆಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ ಸೇರಿ ಅನೇಕರನ್ನು ಅವರು ನಾಯಿಗೆ ಹೋಲಿಸಿದ್ದರು. ದಾಂಡೇಲಿ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಮಹಬೂಬಸಾಬ್ ಕಿಲ್ಲೆದಾರ್ ಇದನ್ನು ಗಮನಿಸಿದರು. ಈ ಬಗ್ಗೆ ಅವರು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡರು. ನಕಲಿ ಫೇಸ್ಪುಕ್ ಖಾತೆಯ ಹಿಂದಿದ್ದ ಅಸಲಿ ವ್ಯಕ್ತಿಯನ್ನು ಕಂಡು ಹಿಡಿದ ದಾಂಡೇಲಿ ಪೊಲೀಸರು ಅನೀಸ್ ಅಬ್ದುಲ್ ಕರೀಂ ಹುಲುಗೂರು'ವಿಗೆ ಬೆಂಡೆತ್ತಿದರು.

ಸದ್ಯ ನ್ಯಾಯಾಲಯವೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪಿಎಸ್‌ಐ ಅಮೀನ್ ಅತ್ತಾರ್ ಅವರು ವಿಚಾರಣೆ ಮುಂದುವರೆಸಿದ್ದಾರೆ.