Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-05-11

ಶೌಚಾಲಯದಲ್ಲಿ ಶವವಾಗಿ ಪತ್ತೆ – ಕರಾವಳಿ ಕಾವಲುದ ಪೊಲೀಸ್ ರಾಜೇಶ್ ಖಾರ್ವಿಗೆ ದಿಢೀರ್ ಮರಣ

News Details

ಹೊನ್ನಾವರದ ಕರಾವಳಿ ಕಾವಲು ಪಡೆಯ ಪೊಲೀಸ್ ಸಿಬ್ಬಂದಿ ರಾಜೇಶ್ ಖಾರ್ವಿ ದಿಢೀರ್ ಆಗಿ ಸಾವನಪ್ಪಿದ್ದಾರೆ. ಶೌಚಾಲಯದಲ್ಲಿ ಅವರು ಸಾವನಪ್ಪಿದ ಸ್ಥಿತಿಯಲ್ಲಿ ಸಿಕ್ಕಿದ್ದಾರೆ.

ಮಂಕಿ ಗ್ರಾಮದ ಮಡಿ ಊರಿನವರಾಗಿದ್ದ ರಾಜೇಶ ಖಾರ್ವಿ ಕಳೆದ ಏಳು ವರ್ಷಗಳಿಂದ ಕರಾವಳಿ ಕಾವಲು ಪಡೆಯಲ್ಲಿದ್ದರು. ಕೆಎನ್‌ಡಿ ವಿಭಾಗದಲ್ಲಿ ಅವರು ಕರ್ತವ್ಯ ನಿಭಾಯಿಸುತ್ತಿದ್ದರು. ಒಂದುವರೆ ವರ್ಷದ ಹಿಂದೆ ಅವರು ಮದುವೆಯಾಗಿದ್ದು, 3 ತಿಂಗಳ ಪುಟ್ಟ ಮಗುವನ್ನು ಹೊಂದಿದ್ದರು.

ಶುಕ್ರವಾರ ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ನಂತರ ಎಲ್ಲಿಯೂ ಕಾಣಿಸಿರಲಿಲ್ಲ. ಶನಿವಾರ ಬೆಳಗ್ಗೆ ಪೊಲೀಸ್ ಸಿಬ್ಬಂದಿಯೊಬ್ಬರು ಶೌಚಾಲಯಕ್ಕೆ ತೆರಳಿದಾಗ ಅಲ್ಲಿ ರಾಜೇಶ ಖಾರ್ವಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸಿದರು. ಅವರನ್ನು ಎಬ್ಬಿಸಿದಾಗ ಏಳಲಿಲ್ಲ.

ಅದಾದ ನಂತರ ರಾಜೇಶ ಖಾರ್ವಿ ಸಾವನಪ್ಪಿರುವುದು ಗೊತ್ತಾಗಿದೆ. ಹೃದಯಘಾತದಿಂದ ಅವರು ಸಾವನಪ್ಪಿರುವ ಶಂಕೆಯಿದೆ. ರಾತ್ರಿ ಪಾಳಿಯ ಕರ್ತವ್ಯದ ಅವಧಿಯಲ್ಲಿ ರಾಜೇಶ ಖಾರ್ವಿ ಕೊನೆಉಸಿರೆಳೆದಿದ್ದಾರೆ.