
ಕಾಗೋಡ ತಿಮ್ಮಪ್ಪರಿಂದ ಸಿಎಂಗೆ ಪತ್ರ
News Details
ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡಿರುವ ಬಡ ಜನರ ಬಗ್ಗೆ ಹೋರಾಟ ನಡೆಸುತ್ತಿರುವ ಹಿರಿಯ ಸಾಮಾಜಿಕ ಚಿಂತಕ ಕಾಗೋಡ ತಿಮ್ಮಪ್ಪ ಅವರು ಹೋರಾಟದ ಮುಂದಿನ ಹಾದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
`ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳ ಸಾಗುವಳಿ ಹಕ್ಕಿಗೆ ಸಂಬoಧಿಸಿ ಕಾನೂನುಬಾಹಿರವಾಗಿ ಪುನರ್ ಪರಿಶೀಲನೆ ಮಾಡುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸಬೇಕು' ಎಂದವರು ಒತ್ತಾಯಿಸಿದ್ದಾರೆ. `ನಿಯಮದಲ್ಲಿ ನಿರ್ದಿಷ್ಟಪಡಿಸಿದ ಸಾಂದರ್ಭಿಕ ಸಾಕ್ಷವನ್ನು ಅರಣ್ಯ ಭೂಮಿ ಹಕ್ಕಿಗೆ ಪರಿಗಣಿಸಲು ನಿರ್ದೆಶನ ನೀಡಬೇಕು' ಎಂದು ಆಗ್ರಹಿಸಿದ್ದಾರೆ.
`ಅರಣ್ಯವಾಸಿಗಳಿಗೆ ಈಗಲೂ ಮೂರು ತಲೆಮಾರಿನ ವಯಕ್ತಿಕ ದಾಖಲೆಗೆ ಒತ್ತಾಯಿಸಲಾಗುತ್ತಿದೆ. ಕಾನೂನಿನ 1ನೇ ನಿಯಮದಲ್ಲಿ ನಿರ್ದಿಷ್ಟಪಡಿಸಿದ ಒಂದಕ್ಕಿoತ ಹೆಚ್ಚು ಸಾಂದರ್ಭಿಕ ಸಾಕ್ಷ ಪರಿಗಣಿಸುವದನ್ನು ಗಂಭೀರವಾಗಿ ಪರಿಗಣಿಸಿಲ್ಲ' ಎಂದವರು ಅಸಮಧಾನವ್ಯಕ್ತಪಡಿಸಿದ್ದಾರೆ. ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಈ ವೇಳೆ ಕಾನೂನುಬಾಹಿರ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನ ಪುನರ್ ಪರಿಶೀಲನೆ ನಡೆದಿರುವುದನ್ನು ಆಕ್ಷೇಪಿಸಿದ್ದಾರೆ.