Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
17:48:00 2025-04-03

ಕುಮಟಾದ ಹಳೆ ಬಸ್ ನಿಲ್ದಾಣ ಹಾಗೂ ಮಿರ್ಜಾನ್ ಕೋಟೆಕ್ರಾಸಿನ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದವರ ವಿರುದ್ಧ ಪೊಲೀಸ್ ನಿರೀಕ್ಷಕ ಯೋಗೇಶ ಕೆ ಎಂ ಕಾನೂನು ಕ್ರಮ ಜರುಗಿಸಿದ್ದಾರೆ.

News Details

ಕುಮಟಾದ ಹಳೆ ಬಸ್ ನಿಲ್ದಾಣ ಹಾಗೂ ಮಿರ್ಜಾನ್ ಕೋಟೆಕ್ರಾಸಿನ ಬಳಿ ಮಟ್ಕಾ ಚೀಟಿ ಬರೆಯುತ್ತಿದ್ದವರ ವಿರುದ್ಧ ಪೊಲೀಸ್ ನಿರೀಕ್ಷಕ ಯೋಗೇಶ ಕೆ ಎಂ ಕಾನೂನು ಕ್ರಮ ಜರುಗಿಸಿದ್ದಾರೆ.

ಹಳೆ ಬಸ್ ನಿಲ್ದಾಣದ ಬಳಿ ಮಾಸೂರಿನ ಲಕ್ಷಿö್ಮÃಕಾಂತ ಗುನಗಾ ಪೆಟ್ಟಿಗೆ ಅಂಗಡಿ ನಡೆಸುತ್ತಿದ್ದರು. ಕಮಿಷನ್ ಆಸೆಗಾಗಿ ಅವರು ಮಟ್ಕಾ ಆಡಿಸುವುದನ್ನು ರೂಢಿಸಿಕೊಂಡಿದ್ದರು. ಪೊಲೀಸ್ ನಿರೀಕ್ಷಕ ಯೋಗೇಶ ಕೆ ಎಂ ಅದಕ್ಕೆ ತಡೆ ಒಡ್ಡಿದರು. 1ರೂಪಾಯಿಗೆ 80ರೂ ಕೊಡುವುದಾಗಿ ಲಕ್ಷಿö್ಮÃಕಾಂತ ಗುನಗಾ ಜನರಿಂದ ಸಂಗ್ರಹಿಸಿದ್ದ 2230ರೂ ಹಣವನ್ನು ಪೊಲೀಸರು ವಶಕ್ಕೆ ಪಡೆದರು. ಜೊತೆಗೆ ಪ್ರಕರಣವನ್ನು ದಾಖಲಿಸಿದರು.

ಕೂಲಿ ಕೆಲಸ ಮಾಡುವ ಮಿರ್ಜಾನಿನ ದಿನೇಶ ಪೈ ಕೋಟೆಕ್ರಾಸಿನ ಬಳಿ ಮಟ್ಕಾ ಆಡಿಸುತ್ತಿದ್ದರು. ಅಲ್ಲಿ ಓಡಾಡುವ ಜನರಿಗೆ ಕರೆದು ಹಣ ಹೂಡಿಕೆ ಮಾಡುವಂತೆ ಒತ್ತಾಯಿಸುತ್ತಿದ್ದರು. ಅವರ ಬಳಿಯಿದ್ದ 520ರೂ ಹಣ, ಮಟ್ಕಾ ಪರಿಕ್ಕರಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಾನೂನುಬಾಹಿರವಾದ ಮಟ್ಕಾ ಆಡಿಸುತ್ತಿದ್ದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ ಕೋರ್ಟು-ಕಚೇರಿ ಅಲೆದಾಡುವಂತೆ ಮಾಡಿದರು.