Loading...
  • aksharakrantinagarajnaik@gmail.com
  • +91 8073197439
Total Visitors: 2789
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
14:27:00 2025-04-07

ಸಾಗವಾನಿ ಮರ ಕಡಿತ: ಯಲ್ಲಾಪುರದಲ್ಲಿ ಮೂವರು ವಶಕ್ಕೆ

News Details

ಯಲ್ಲಾಪುರದ ಇಡಗುಂದಿ ಅರಣ್ಯ ವ್ಯಾಪ್ತಿಯಲ್ಲಿ ಸಾಗವಾನಿ ಮರ ಕಡಿತ ಆರೋಪದ ಅಡಿ ಅರಣ್ಯ ಅಧಿಕಾರಿಗಳು ಮೂವರನ್ನು ವಶಕ್ಕೆಪಡೆದಿದ್ದಾರೆ.

ಕಾಡಿನಲ್ಲಿದ್ದ ಮರ ಕಡಿತು ಸಾಗಿಸುವ ಪ್ರಯತ್ನದಲ್ಲಿದ್ದ ಮಹಾಬಲೇಶ್ವರ ಹರಿಕಂತ್ರ, ಸಂದೀಪ ನಾಯ್ಕ ಹಾಗೂ ಸುರೇಶ ಗೌಡ ಅವರ ವಿಚಾರಣೆ ಮುಂದುವರೆದಿದೆ. ಅಧಿಕಾರಿಗಳ ದಾಳಿಯ ವೇಳೆ ನಾರಾಯಣ ನಾಯಕ ಹಾಗೂ ರವಿ ಹುಲಸ್ವಾರ್ ಎಂಬಾತರು ತಪ್ಪಿಸಿಕೊಂಡಿದ್ದಾರೆ.

ಹಿಲ್ಲೂರಿನ ಮಹಾಬಲೇಶ್ವರ ಹರಿಕಂತ್ರ ಈ ಹಿಂದೆಯೂ ವಿವಿಧ ಅರಣ್ಯ ಅಪರಾಧದಲ್ಲಿ ಭಾಗಿಯಾಗಿದ್ದು, ಮಹಾಬಲೇಶ್ವರ ಹರಿಕಂತ್ರ ವಿರುದ್ಧ ಅನೇಕ ಪ್ರಕರಣಗಳಿವೆ. ಇಡಗುಂದಿ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯಕ ನೇತ್ರತ್ವದಲ್ಲಿ ಈ ದಾಳಿ ನಡೆದಿದೆ. ತಪ್ಪಿಸಿಕೊಂಡಿರುವ ನಾರಾಯಣ ನಾಯಕ ಹಾಗೂ ರವಿ ಹುಲಸ್ವಾರ್ ಪತ್ತೆಗೆ ಹುಡುಕಾಟ ಮುಂದುವರೆದಿದೆ.

ಕಾಡಿನಲ್ಲಿ ಅಡಗಿಸಿಟ್ಟಿದ್ದ 2.50 ಲಕ್ಷ ರೂ ಮೌಲ್ಯದ ಮರದ ತುಂಡುಗಳನ್ನು ಅಧಿಕಾರಿಗಳು ಜಪ್ತು ಮಾಡಿದ್ದಾರೆ. 2.161 ಕ್ಯುಬಿಕ್ ಮೀಟರ್ ಗಾತ್ರದ ಸಾಗವಾನಿ ಜೊತೆ ಸೀಸಂ ಮರಗಳು ಅಲ್ಲಿ ಸಿಕ್ಕಿವೆ.