Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-09

ಮಹಾತ್ಮ ಗಾಂಧಿ ಯೋಜನೆ: ಕೂಲಿ ₹349 ರಿಂದ ₹370ಗೆ ಏರಿಕೆ, 30% ಬೇಸಿಗೆ ವಿನಾಯತಿ

News Details

ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅಡಿ ಕೂಲಿ ಕಾರ್ಮಿಕರಿಗೆ ನೀಡುತ್ತಿದ್ದ 349ರೂಪಾಯಿ ಕೂಲಿ ಮೊತ್ತವನ್ನು 370ರೂಪಾಯಿಗೆ ಏರಿಸಲಾಗಿದೆ. ಇದರೊಂದಿಗೆ ಬೇಸಿಗೆ ಕಾರಣ ಕಾರ್ಮಿಕರ ಕೆಲಸಕ್ಕೆ ಶೇ 30ರ ವಿನಾಯತಿಯನ್ನು ಸಹ ಕಲ್ಪಿಸಲಾಗಿದೆ!

ಈ ಬಗ್ಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಮಂಗಳವಾರ ಮಾಹಿತಿ ನೀಡಿದ್ದು, ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಕಾರಣ ಕೂಲಿಕಾರರ ಆರೋಗ್ಯ ಹಿತದೃಷ್ಟಿಯಿಂದ ಅವರು ಮಾಡುವ ಕೆಲಸದ ಪ್ರಮಾಣಕ್ಕೆ ವಿನಾಯಿತಿ ನೀಡಿರುವುದನ್ನು ಘೋಷಿಸಿದರು. `ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕೆಲಸದ ಪ್ರಮಾಣದಲ್ಲಿ ಶೇ 30ರ ವಿನಾಯತಿ ಸಿಗಲಿದ್ದು, ಮೊದಲಿಗಿಂತಲೂ ಹೆಚ್ಚಿನ ವೇತನ ಸಿಗುವ ಕಾರಣ ಊರಿನಲ್ಲಿಯೇ ಉದ್ಯೋಗ ಮಾಡಬೇಕು' ಎಂದವರು ಕರೆ ನೀಡಿದರು.

`ನರೇಗಾ ಯೋಜನೆಯಡಿ ಅನುಮೋದಿತ ಗುರಿಯನ್ನು ಸಾಧಿಸಲು ಕ್ರಮವಹಿಸಬೇಕು' ಎಂದು ಅಧೀನ ಅಧಿಕಾರಿಗಳಿಗೆ ಸೂಚಿಸಿದರು. `ಭವಿಷ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಗ್ಗಿಸಲು ಭೌಗೋಳಿಕ ವರದಿ ಅನುಸಾರ ಅವಶ್ಯಕತೆ ಇರುವಲ್ಲಿ ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಿಸಬೇಕು. ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯತ್ಯಯವಾಗದಂತೆ ಅಗತ್ಯ ಮುತುವರ್ಜಿ ವಹಿಸಬೇಕು' ಎಂದು ಸೂಚಿಸಿದರು.