Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-09

ಉತ್ತರ ಕನ್ನಡದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿಗೆ ಕಠಿಣ ಕ್ರಮ, ಜಿಲ್ಲಾಧಿಕಾರಿಯ ಸೂಚನೆ

News Details

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಯನ್ನು ಅತ್ಯಂತ ಕಟುನಿಟ್ಟಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯಾದ್ಯಂತ ವ್ಯಾಪಕ ರೀತಿಯಲ್ಲಿ ತಪಾಸಣಾ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷಿö್ಮÃಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಹಾಗೂ ಕಾಂiÀiðಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ನೇಮಕಗೊಂಡಿರುವ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲೆಯಲ್ಲಿ ವ್ಯಾಪಕ ತಪಾಸಣೆಗಳನ್ನು ನಡೆಸಬೇಕು, ಶಾಲೆಗಳಲ್ಲಿ 7 ದಿನಕ್ಕಿಂತ ಹೆಚ್ಚು ಗೈರು ಹಾಜರಾದ ಮಕ್ಕಳ ಹಾಜರಾತಿಯನ್ನು ಪರಿಶೀಲಿಸಿ ಅವರು ಬಾಲ ಕಾರ್ಮಿಕಪದ್ದತಿಗೆ ಒಳಗಾಗದೇ ಇರುವ ಬಗ್ಗೆ ಪರಿಶೀಲಿಸಬೇಕು, ಬಾಲ ಕಾರ್ಮಿಕರು ಕಂಡು ಬಂದಲ್ಲಿ ಅವರಿಗೆ ಸೂಕ್ತ ಪುರ್ನವಸತಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳು ಮತ್ತು ಇದರ ನಿಷೇಧ ಕಾಯ್ದೆಯ ಬಗ್ಗೆ, ಇದರ ಉಲ್ಲಂಘನೆಯ ಕುರಿತ ದಂಡ ಮತ್ತು ಶಿಕ್ಷೆಯ ಬಗ್ಗೆ ಜಿಲ್ಲೆಯಲ್ಲಿನ ವಿವಿಧ ಸಂಸ್ಥೆಗಳ ಮಾಲೀಕರಿಗೆ ಅರಿವು ಮೂಡಿಸಬೇಕು, ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬAಧಪಟ್ಟ ಸಂಸ್ಥೆಯ ಮಾಲೀಕರ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಮಕ್ಕಳಿಗೆ ತಮ್ಮ ಸುತ್ತಮುತ್ತ ತಮ್ಮದೇ ವಯೋಮಾನದ ಬಾಲ ಕಾರ್ಮಿಕರು ಕಂಡುಬAದಲ್ಲಿ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಗೆ ಮಾಹಿತಿ ನೀಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಬಾಲ ಮತ್ತು ಕಿಶೋರ ಕಾರ್ಮಿಕರು ಪತ್ತೆಯಾದಲ್ಲಿ ಸಂಬAಧಪಟ್ಟ ಸಂಸ್ಥೆಗಳ ಮಾಲೀಕರಿಂದ ಕಾರ‍್ಸ್ ಫಂಡ್ ಮೊತ್ತವನ್ನು ಕಡ್ಡಾಯವಾಗಿ ವಸೂಲಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ದಂಡ ಪಾವತಿಸದೇ ಇರುವವರ ವಿವರಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಮತ್ತು ಸಂಬAಧಪಟ್ಡ ವ್ಯಾಪ್ತಿಯ ತಹಶೀಲ್ದಾರ್ ಗಳಿಗೆ ನೀಡುವಂತೆ ಸೂಚಿಸಿದರು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು, ಈ ಸೌಲಭ್ಯಗಳನ್ನು ಪಡೆಯುವ ಕುರಿತು ಅರ್ಜಿ ಸಲ್ಲಿಸುವ ಬಗ್ಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿರುವ ಅರ್ಜಿ ಲೈಬ್ರರಿಯನ್‌ಗಳಿಗೆ ತರಬೇತಿ ನೀಡುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ಬಾಲ ಕಾರ್ಮಿಕ ನಿರ್ಮೂಲನೆ ಮತ್ತು ಪುರ್ನವಸತಿ ಸಮಿತಿ ಹಾಗೂ ಕಾರ್ಯಪಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸುವ ಮೂಲಕ ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿಯ ಯಾವುದೇ ಪ್ರಕರಣಗಳು ಕಂಡು ಬರದಂತೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನಗಳನ್ನು ನೀಡಿದರು.
ಏಪ್ರಿಲ್ 2024 ರಿಂದ ಮಾರ್ಚ್ 2025 ರ ವರೆಗೆ ಜಿಲ್ಲೆಯಾದ್ಯಂತ ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆಗೆ 1756 ತಪಾಸಣೆಗಳನ್ನು ಕೈಗೊಂಡಿದ್ದು, 6 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದು, 5 ಪ್ರಕರಣಗಳನ್ನು ದಾಖಲಿಸಲಾಗಿದೆ, ಕಾಯ್ದೆಯ ಕುರಿತಂತೆ ಜಿಲ್ಲೆಯಾದ್ಯಂತ ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಮತ್ತು ಕಾರ್ಯಗಾರಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಮಾಹಿತಿ ನಿಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.