Loading...
  • aksharakrantinagarajnaik@gmail.com
  • +91 8073197439
Total Visitors: 2788
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
0:00:00 2025-04-09

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಯು. ವಿಜಯೇಂದ್ರ ಏಪ್ರಿಲ್ 11ರಂದು ಯಲ್ಲಾಪುರಕ್ಕೆ, ಜನಾಕ್ರೋಶ ಯಾತ್ರೆ

News Details

ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಏಪ್ರಿಲ್ 11ರಂದು ಯಲ್ಲಾಪುರಕ್ಕೆ ಬರಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ಜನಾಕ್ರೋಶದ ಯಾತ್ರೆ ಸಂಚರಿಸಲಿದೆ.

`ಕಾ0ಗ್ರೆಸ್ ಸರ್ಕಾರದ ದುರಾಡಳಿತ, ಸ್ವಜನ ಪಕ್ಷಪಾತ, ವೋಟ್ ಬ್ಯಾಂಕ್ ರಾಜಕಾರಾಣ, ದಲಿತ ಅಭಿವೃದ್ಧಿಗೆ ಮೀಸಲಿಟ್ಟ ನಿಧಿಯ ದುರುಪಯೋಗ, ಮುಸ್ಲಿಂ ಸಮುದಾಯದ ಓಲೈಕೆ ವಿರುದ್ಧ ಈ ಜಾಥಾ ನಡೆಯಲಿದೆ. ಏ 11ರಂದು ಬೆಳಗ್ಗೆ 10 ಗಂಟೆಗೆ ಶಕ್ತಿ ದೇವತೆಯರಾದ ಗ್ರಾಮದೇವಿಯರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಅದಾದ ನಂತರ ಪಾದಯಾತ್ರೆ ಮುಂದೆ ಸಾಗಲಿದೆ' ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಮಾಹಿತಿ ನೀಡಿದ್ದಾರೆ.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣೆಮನೆ, ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಯಲ್ಲಾಪುರ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಮುಖರಾದ ಗೋಪಾಲಕೃಷ್ಣ ಗಾಂವ್ಕರ್, ಉಮೇಶ್ ಭಾಗ್ವತ್, ಪ್ರಶಾಂತ ನಾಯ್ಕ್, ಶಿವಾಜಿ ನರಸಾನಿ, ಚಂದ್ರಕಲಾ ಭಟ್, ರಜನಿ ಚಂದ್ರಶೇಖರ್, ಕೆ ಟಿ ಹೆಗಡೆ, ಎನ್ ಕೆ ಭಟ್ ಅಗ್ಗಾಶಿಕುಂಬ್ರಿ, ಗಣಪತಿ ಮಾನಿಗದ್ದೆ, ರವಿಕೈಟ್ಕರ್, ನಟರಾಜ ಗೌಡರ್, ಸೋಮೇಶ್ವರ ನಾಯ್ಕ್, ರಜತ್ ಬದ್ದಿ ಇತರರು ಇದ್ದರು.